26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜು.10 ರಿಂದ ಆ.20ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದಲ್ಲಿ ನಡೆಯಲಿದೆ.


ಜು.10 ಗುರುವಾರ ಗುರುಪೂರ್ಣಿಮೆ ಯಂದು ವನದುರ್ಗಾ ದೇವಾಲಯದಲ್ಲಿ ಬೆಳಿಗ್ಗೆ 7.೦೦ ಗಂಟೆಯಿಂದ 9.೦೦ ಗಂಟೆಯವರೆಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ಹಾಗೂ ವೈದಿಕ ವಿಧಿ-ವಿಧಾನಗಳು ನೆರವೇರಲಿದೆ. ಕುಮುಟಾ ನಾಮಧಾರಿ ಸಭಾಭವನದ ಆವರಣದಲ್ಲಿರುವ ಶ್ರೀ ವೆಂಕಟ್ರಮಣ ದೇವರಿಗೆ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಶ್ರೀಗಳ ಪುರಪ್ರವೇಶದ ಭವ್ಯ ಮೆರವಣಿಗೆ ಪ್ರಾರಂಭಗೊಳ್ಳಲಿದೆ.


ದಿನಂಪ್ರತಿ ಹೆಸರಾಂತ ಕಲಾ ತಂಡಗಳಿಂದ ಭರತನಾಟ್ಯ ವೈಭವ, ಗೀತಾರೂಪಕ, ತಾಳೆಗರಿ ರಾಮಾಯಣ ಪಠಣ, ಕುಂಚ ಗೀತಾ ರಾಮ ಕಥಾ, ಸುಗಮ ಸಂಗೀತ, ಭಜನೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಗುರುಪೂಜೆ, ಅನ್ನಸಂತರ್ಪಣೆ ಜರುಗಲಿದೆ.

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!