September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ ‘ಮಂಗಳೂರು ಸಮಾಚಾರ’ ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಕರ್ನಾಟಕದಲ್ಲಿ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.೫ರಂದು ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಪತ್ರಿಕಾ ದಿನಾಚರಣೆ- 2025 ಜರುಗಲಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮ ಉದ್ಘಾಟಿಸಲಿರುವರು,ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಮಂಗಳೂರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸುವರು. ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಉಪನ್ಯಾಸ ನೀಡಲಿದ್ದಾರೆ.

ಈ ಸಂದರ್ಭದಲ್ಲಿ 2024-25ನೇ ಸಾಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ.ಜೊತೆಗೆ ಅಸೌಖ್ಯದಿಂದ ಬಳಲುತ್ತಿರುವವರಿಗೆ ದಿತಿ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!