ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಜಿಯಿಂದ ಎರಡನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ ಹೆಚ್ ಆಗಮಿಸಿ ಮಕ್ಕಳ ದೈಹಿಕ ಬೆಳವಣಿಗೆಗೆ ಬೇಕಾದ ಆಹಾರ ಕ್ರಮ, ಮಕ್ಕಳ ಮಾನಸಿಕ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯ ಎಂಬುದರ ಕುರಿತಾಗಿ ಸವಿವರವಾದ ಮಾಹಿತಿಯನ್ನು ಪೋಷಕರಿಗೆ ನೀಡಿದರು.

ಕರಡಿಪಾಥ್ ತರಗತಿಗಳ ತರಬೇತುದಾರ ನಿಖಿಲ್ ಅವರು ಕರಡಿಪಾಥ್ ತರಗತಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು,. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ರವರು ಶಾಲಾ ರೀತಿ ನೀತಿಗಳನ್ನು ವಿವರಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮಕ್ಕಳನ್ನು ಕಬ್ ಬುಲ್ ಬುಲ್ ದಳಕ್ಕೆ ಸೇರಿಸುವ ಕುರಿತಾಗಿ ಶಾಲೆಯ ಫ್ಲಾಕ್ ಲೀಡರ್ ಸೌಮ್ಯ ಮಾಹಿತಿ ನೀಡಿದರು. ಪುಟಾಣಿ ಮಕ್ಕಳ ಕಾಳಜಿಗಳ ಕುರಿತಾಗಿ ಹಾಗೂ ಬನ್ನಿ ದಳದ ಬಗ್ಗೆ ಶ್ರೀಮತಿ ಪ್ರೀತಿ ತಿಳಿ ಹೇಳಿದರು. ತರಗತಿ ಶಿಕ್ಷಕರುಗಳು ತಮ್ಮ ಪರಿಚಯವನ್ನು ಪೋಷಕರಿಗೆ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಗೀತಾ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರೀತಿ ವಂದಿಸಿದರು.

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!