25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

ಧರ್ಮಸ್ಥಳ : ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಹಯೋಗದಲ್ಲಿ ನಾಟಕ ಯಕ್ಷಗಾನ ಸೆಮಿ ಕ್ಲಾಸಿಕಲ್ ಹಾಗೂ ಪಶ್ಚಿಮಾತ್ಯ ಶೈಲಿಯ ನೃತ್ಯ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಂಚಾಲಕಿ ತೃಪ್ತ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಾಕೇಂದ್ರದ ವತಿಯಿಂದ ನಿರ್ವಹಿಸುವ ಈ ತರಭೇತಿಯ ಸದುಪಯೋಗಪಡಿಸಿಕೊಳ್ಳಿ, ಹಾಗೂ ಈ ಎಲ್ಲಾ ತರಬೇತಿಗಳ ಪ್ರಯೋಜನ ಏನು ಇತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವಕಾಶವನ್ನು ಬಳಸುವ ಬಗ್ಗೆ,ಪ್ರತಿಭೆಗೆ ನೀರೆರೆದು ಪೋಷಿಸುವ ಬಗ್ಗೆ, ಪಠ್ಯೇತರ ಚಟುವಟಿಕೆಗಳ ಅಗತ್ಯ ಹಾಗೂ ಅವುಗಳ ಪ್ರಯೋಜನ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಗತ್ಯಗಳನ್ನು ವಿವರಿಸಿದರು. ತೇಜಸ್ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಅನುಜ್ಞಾ ಸ್ವಾಗತಿಸಿ, ಕುಮಾರಿ ಕಲ್ಪಿತ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಯಕ್ಷಗಾನ ತರಬೇತಿದಾರರಾಗಿ ಅರುಣ್ ಕುಮಾರ್, ನಾಟಕ ತರಬೇತಿದಾರರಾಗಿ ಯಶವಂತ್ ಬೆಳ್ತಂಗಡಿ, ಪಾಶ್ಚಿಮಾತ್ಯ ನೃತ್ಯ ತರಬೇತಿದಾರರಾಗಿ ವಿನ್ಯಾಸ್, ಸೆಮಿ ಕ್ಲಾಸಿಕಲ್ ನೃತ್ಯ ತರಬೇತುದಾರರಾಗಿ ಶ್ರೀಮತಿ ಚೈತ್ರ,ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!