24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

ಧರ್ಮಸ್ಥಳ : ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಹಯೋಗದಲ್ಲಿ ನಾಟಕ ಯಕ್ಷಗಾನ ಸೆಮಿ ಕ್ಲಾಸಿಕಲ್ ಹಾಗೂ ಪಶ್ಚಿಮಾತ್ಯ ಶೈಲಿಯ ನೃತ್ಯ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಂಚಾಲಕಿ ತೃಪ್ತ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಾಕೇಂದ್ರದ ವತಿಯಿಂದ ನಿರ್ವಹಿಸುವ ಈ ತರಭೇತಿಯ ಸದುಪಯೋಗಪಡಿಸಿಕೊಳ್ಳಿ, ಹಾಗೂ ಈ ಎಲ್ಲಾ ತರಬೇತಿಗಳ ಪ್ರಯೋಜನ ಏನು ಇತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವಕಾಶವನ್ನು ಬಳಸುವ ಬಗ್ಗೆ,ಪ್ರತಿಭೆಗೆ ನೀರೆರೆದು ಪೋಷಿಸುವ ಬಗ್ಗೆ, ಪಠ್ಯೇತರ ಚಟುವಟಿಕೆಗಳ ಅಗತ್ಯ ಹಾಗೂ ಅವುಗಳ ಪ್ರಯೋಜನ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಗತ್ಯಗಳನ್ನು ವಿವರಿಸಿದರು. ತೇಜಸ್ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಅನುಜ್ಞಾ ಸ್ವಾಗತಿಸಿ, ಕುಮಾರಿ ಕಲ್ಪಿತ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಯಕ್ಷಗಾನ ತರಬೇತಿದಾರರಾಗಿ ಅರುಣ್ ಕುಮಾರ್, ನಾಟಕ ತರಬೇತಿದಾರರಾಗಿ ಯಶವಂತ್ ಬೆಳ್ತಂಗಡಿ, ಪಾಶ್ಚಿಮಾತ್ಯ ನೃತ್ಯ ತರಬೇತಿದಾರರಾಗಿ ವಿನ್ಯಾಸ್, ಸೆಮಿ ಕ್ಲಾಸಿಕಲ್ ನೃತ್ಯ ತರಬೇತುದಾರರಾಗಿ ಶ್ರೀಮತಿ ಚೈತ್ರ,ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya
error: Content is protected !!