23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

ಉಜಿರೆ : ನಾವು ಕೈಗೊಳ್ಳುವ ವೃತ್ತಿಯಲ್ಲಿ ಶಿಸ್ತು ಬಹುಮುಖ್ಯ. ನೀವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅನ್ನುವುದನ್ನು ಅಳವಡಿಸಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಂಡು ಮುಂದುವರೆಯಬೇಕು. ವಿಶೇಷವಾಗಿ ಮಹಿಳೆಯರು ಸಮತೋಲನೆಯೊಂದಿಗೆ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಿ. ಗ್ರಾಹಕರ ಜೊತೆಗೆ ಉತ್ತಮ ಸಂವಹನ ಮಾಡಿ. ಉತ್ತಮವಾದ ಮನೋಭಾವ ಬೆಳಸಿಕೊಳ್ಳಿ. ಸರಕಾರದ ಮತ್ತು ಬ್ಯಾಂಕಿನ ಆರ್ಥೀಕ ಸಹಕಾರ ಪಡೆದುಕೊಂಡು ಮುಂದುವರೆಯಿರಿ. ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಇಂತಹ ಒಂದು ಉತ್ತಮವಾದ ಅವಕಾಶ ಕಲ್ಪಸಿಕೊಟ್ಟಿದ್ದಾರೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ವಿಭಾಗ ಡೀನ್ ಡಾ. ಸೌಮ್ಯ ಬಿ.ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 45 ದಿನಗಳ ಕಾಲ ನಡೆದ ಕಂಪ್ಯೂಟರ್ ಡಿ.ಟಿ.ಪಿ ಮತ್ತ 30 ದಿನಗಳ ಕಾಲ ನಡೆದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪ್ಯಾಸಕಿಯಾದ ಶ್ರೀಮತಿ ವೀಣಾ ಉಪಸ್ಥಿತರಿದ್ದರು. ಕುಮಾರಿ ವಿಧ್ರಾತ್ರಿ ಪ್ರಾರ್ಥನೆ ಮಾಡಿದರು. ಶಿಬಿರಾರ್ಥೀಗಳಾದ ಬಸವರಾಜ್, ಶೃಜನ್ಯ, ದಿವ್ಯಾ, ವಿಧಾತ್ರಿ ತಮ್ಮ ತರಬೇತಿಯ ಅನುಭವ ಹಂಚಿಕೊಂಡರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!