ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

ಕಡಿರುದ್ಯಾವರ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ, ಗ್ರಾಮ ಪಂಚಾಯತ್ ಕಡಿರುಧ್ಯಾವರ, ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ,‌ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಜು.4 ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನೇತ್ರಾವತಿಯವರು ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಶ್ರೀಮತಿ ಜೆಸಿಂತಾ ಡಿಸೋಜ ರವರು ಡೆಂಗ್ಯೂ ನಿಯಂತ್ರಣ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ರವರು ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಲೀಂ ಆರೋಗ್ಯ ನಿರೀಕ್ಷಕರು, ಮಂಗಳೂರು ಮತ್ತು ಚೇತನ್ ನೋಡಲ್ ಕೀಟ ತಜ್ಞರು ಮಂಗಳೂರು ಇವರು ಡೆಂಗ್ಯೂ ಜ್ವರ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.

ಮಾನಿನಿ ಮಹಿಳಾ ರಾಜ್ಯ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ನೇಹ ಜ್ಯೋತಿ ಒಕ್ಕೂಟದ ಸದಸ್ಯೆ ಶ್ರೀಮತಿ ಸಂಧ್ಯಾ ರವರು ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ತಾವೇ ರಚಿಸಿ ಹಾಡಿದರು. ಕೀಟ ತಜ್ಞರು ಡಾ.ರೇಷ್ಮ ಮತ್ತು ಆರೋಗ್ಯಾಧಿಕಾರಿ ಕಛೇರಿ ಸಿಬ್ಬಂದಿ ವರ್ಗದವರು,‌ ಜಿಲ್ಲಾ ನಿಯಂತ್ರಣಾಧಿಕಾರಿ ಕಛೇರಿ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು, ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗದವರು ಮತ್ತು ಸ್ನೇಹ ಜ್ಯೋತಿ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಯಶಸ್ಸಿಗೆ ಸಹಕರಿಸಿದರು.

ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ್ ವಠಾರದಲ್ಲಿ ಹಣ್ಣಿನ ಗಿಡ ನೆಡಲಾಯಿತು. ಸೊಳ್ಳೆ ಉತ್ಪತ್ತಿ ನಾಶದ ಬಗ್ಗೆ ಮನೆಮನೆ ಭೇಟಿ ಮೂಲಕ ಮಾಹಿತಿ ನೀಡಿ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಯಿತು
ಸಮೂದಾಯ ಆರೋಗ್ಯ ಶಿಕ್ಷಣ ಅಧಿಕಾರಿ ಶ್ರೀಮತಿ ಅಮ್ಮಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಆರೋಗ್ಯ ನಿರೀಕ್ಷಕರು ರಕ್ಷಿತ್ ವಂದಿಸಿದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya
error: Content is protected !!