23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

ಮಡಂತ್ಯಾರು : ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಶಿಶು ವಿಹಾರ ಮಹಿಳಾ ಮಂಡಲದಲ್ಲಿ ಜೆಸಿ ಸಮ್ಮಿಲನ ಇತ್ತೀಚೆಗೆ ನಡೆಯಿತು.

ಜೆಸಿ ಭಾರತಿ ಸುರೇಶ್ ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಜೆಸಿ ಸದಸ್ಯರೆಲ್ಲರೂ ಜೆಸಿವಾಣಿ ವಾಚಿಸಿದರು. ಕಾರ್ಯಕ್ರಮವನ್ನು ಘಟಕದ ಪೂರ್ವಧ್ಯಕ್ಷರು ಜೆಸಿ ಬಿ. ಜಯಂತ ಶೆಟ್ಟಿ ಬಂಡಾರಿಗುಡ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಶುಭವನ್ನ ಹಾರೈಸುವುದರೊಂದಿಗೆ ಹಿಂದಿನ ಘಟಕದ ಕಾರ್ಯಕ್ರಮಕ್ಕೂ ಈಗಿರುವ ಸಂಸ್ಥೆಯ ಕಾರ್ಯಕ್ರಮಕ್ಕೂ ಹೊಂದಾಣಿಕೆಯ ವಿಚಾರಗಳ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜೆಸಿಐ ವಲಯ 15 ರ ಉಪಾಧ್ಯಕ್ಷ ರಂಜಿತ್ ಎಚ್ ಡಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಯನ್ನು 10 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಅಧ್ಯಕ್ಷ ಸಚಿನ್ ಸುವರ್ಣ ಇವರಿಗೆ ನೀಡಿ ಗೌರವಿಸಲಾಯಿತು.

ಅಧ್ಯಕ್ಷೆ ಜೆಸಿ ಅಮಿತಾ ಅಶೋಕ್ ಸ್ವಾಗತಿಸಿದರು. ಜೆಸಿ ಮನೋಜ್ ಮಾಯಿಲೋಡಿ ಸನ್ಮಾನಿತರ ಪರಿಚಯ ವಾಚಿಸಿದರು. ಜೆಸಿಐ ಕುಟುಂಬಕ್ಕೆ ಹೊಸದಾಗಿ ಸೇರ್ಪಡೆ ಗೊಂಡ ಶ್ರೀಮತಿ ಅಶ್ವಿನಿ ಯವರಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಬೋದಿಸಿದರು, ವಲಯ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯದರ್ಶಿ ಜೇಸಿ ಆದರ್ಶ ಹಟ್ಟತ್ತೊಡಿ ಧನ್ಯವಾದವಿತ್ತರು.


ಜೆಸಿ ತುಳಸಿ ದಾಸ್ ಪೈ ಮನೋರಂಜನೇಯ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ವಿತ್ತರು. ಜೇಸಿ ವಿಕೇಶ್ ಮಾನ್ಯ ಹಾಗೂ ಜೇಸಿ ಅಜಯ್ ಜೆ. ಶೆಟ್ಟಿ ಇವರ ಆತಿಥ್ಯದಲ್ಲಿ ಕಾರ್ಯಕ್ರಮ ನಡೆಯಿತು

Related posts

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!