ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

ಮಡಂತ್ಯಾರು : ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಶಿಶು ವಿಹಾರ ಮಹಿಳಾ ಮಂಡಲದಲ್ಲಿ ಜೆಸಿ ಸಮ್ಮಿಲನ ಇತ್ತೀಚೆಗೆ ನಡೆಯಿತು.

ಜೆಸಿ ಭಾರತಿ ಸುರೇಶ್ ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಜೆಸಿ ಸದಸ್ಯರೆಲ್ಲರೂ ಜೆಸಿವಾಣಿ ವಾಚಿಸಿದರು. ಕಾರ್ಯಕ್ರಮವನ್ನು ಘಟಕದ ಪೂರ್ವಧ್ಯಕ್ಷರು ಜೆಸಿ ಬಿ. ಜಯಂತ ಶೆಟ್ಟಿ ಬಂಡಾರಿಗುಡ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಶುಭವನ್ನ ಹಾರೈಸುವುದರೊಂದಿಗೆ ಹಿಂದಿನ ಘಟಕದ ಕಾರ್ಯಕ್ರಮಕ್ಕೂ ಈಗಿರುವ ಸಂಸ್ಥೆಯ ಕಾರ್ಯಕ್ರಮಕ್ಕೂ ಹೊಂದಾಣಿಕೆಯ ವಿಚಾರಗಳ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜೆಸಿಐ ವಲಯ 15 ರ ಉಪಾಧ್ಯಕ್ಷ ರಂಜಿತ್ ಎಚ್ ಡಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಯನ್ನು 10 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಅಧ್ಯಕ್ಷ ಸಚಿನ್ ಸುವರ್ಣ ಇವರಿಗೆ ನೀಡಿ ಗೌರವಿಸಲಾಯಿತು.

ಅಧ್ಯಕ್ಷೆ ಜೆಸಿ ಅಮಿತಾ ಅಶೋಕ್ ಸ್ವಾಗತಿಸಿದರು. ಜೆಸಿ ಮನೋಜ್ ಮಾಯಿಲೋಡಿ ಸನ್ಮಾನಿತರ ಪರಿಚಯ ವಾಚಿಸಿದರು. ಜೆಸಿಐ ಕುಟುಂಬಕ್ಕೆ ಹೊಸದಾಗಿ ಸೇರ್ಪಡೆ ಗೊಂಡ ಶ್ರೀಮತಿ ಅಶ್ವಿನಿ ಯವರಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಬೋದಿಸಿದರು, ವಲಯ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯದರ್ಶಿ ಜೇಸಿ ಆದರ್ಶ ಹಟ್ಟತ್ತೊಡಿ ಧನ್ಯವಾದವಿತ್ತರು.


ಜೆಸಿ ತುಳಸಿ ದಾಸ್ ಪೈ ಮನೋರಂಜನೇಯ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ವಿತ್ತರು. ಜೇಸಿ ವಿಕೇಶ್ ಮಾನ್ಯ ಹಾಗೂ ಜೇಸಿ ಅಜಯ್ ಜೆ. ಶೆಟ್ಟಿ ಇವರ ಆತಿಥ್ಯದಲ್ಲಿ ಕಾರ್ಯಕ್ರಮ ನಡೆಯಿತು

Related posts

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya
error: Content is protected !!