30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಪತ್ರ ವೈರಲ್ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು ವಿಚಾರಣೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ವಕೀಲರು ಹೊರಡಿಸಿರುವ ಪತ್ರದಲ್ಲಿ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಹಲವಾರು ಕೊಲೆ, ಅತ್ಯಾಚಾರ ಮಾಡಿದ ಮೃತದೇಹಗಳನ್ನು ಹೂತು ಹಾಕಿದ್ದು ಅದನ್ನು ಪೊಲೀಸರು ಪ್ರಕರಣ ದಾಖಲಿಸಿ ಆತನಿಗೆ ಭದ್ರತೆ ನೀಡಿಬೇಕು ಬಳಿಕ ಎಲ್ಲಾ ಹೂತು ಹಾಕಿದ ಮೃತದೇಹ ಪೊಲೀಸರಿಗೆ ಗೌಪ್ಯವಾಗಿ ತೊರಿಸಿಕೊಡುತ್ತೇನೆ.ಅದಲ್ಲದೆ ಇತ್ತಿಚೆಗೆ ಗೌಪ್ಯವಾಗಿ ಬಂದು ಹೂತು ಹಾಕಿದ ಮೃತದೇಹದ ಕಳೇಬರ ಹೊರತೆಗೆದಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ.

ದೂರಿನ ಜೊತೆ ಕೆಲಸ ಮಾಡಿದ ಸಂಸ್ಥೆಯ ಐಡಿ ಕಾರ್ಡ್ ,ಆಧಾರ್ ಕಾರ್ಡ್ , ಹೊರತೆಗೆದ ಕಳೇಬರದ ಫೋಟೋ ಜೊತೆಯಲ್ಲಿ ಲಗತ್ತು ಮಾಡಿರುವುದಾಗಿ 6 ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya
error: Content is protected !!