July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!