23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
error: Content is protected !!