25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
error: Content is protected !!