September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

ಉಜಿರೆ : ನಾವು ಕೈಗೊಳ್ಳುವ ವೃತ್ತಿಯಲ್ಲಿ ಶಿಸ್ತು ಬಹುಮುಖ್ಯ. ನೀವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅನ್ನುವುದನ್ನು ಅಳವಡಿಸಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಂಡು ಮುಂದುವರೆಯಬೇಕು. ವಿಶೇಷವಾಗಿ ಮಹಿಳೆಯರು ಸಮತೋಲನೆಯೊಂದಿಗೆ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಿ. ಗ್ರಾಹಕರ ಜೊತೆಗೆ ಉತ್ತಮ ಸಂವಹನ ಮಾಡಿ. ಉತ್ತಮವಾದ ಮನೋಭಾವ ಬೆಳಸಿಕೊಳ್ಳಿ. ಸರಕಾರದ ಮತ್ತು ಬ್ಯಾಂಕಿನ ಆರ್ಥೀಕ ಸಹಕಾರ ಪಡೆದುಕೊಂಡು ಮುಂದುವರೆಯಿರಿ. ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಇಂತಹ ಒಂದು ಉತ್ತಮವಾದ ಅವಕಾಶ ಕಲ್ಪಸಿಕೊಟ್ಟಿದ್ದಾರೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ವಿಭಾಗ ಡೀನ್ ಡಾ. ಸೌಮ್ಯ ಬಿ.ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 45 ದಿನಗಳ ಕಾಲ ನಡೆದ ಕಂಪ್ಯೂಟರ್ ಡಿ.ಟಿ.ಪಿ ಮತ್ತ 30 ದಿನಗಳ ಕಾಲ ನಡೆದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪ್ಯಾಸಕಿಯಾದ ಶ್ರೀಮತಿ ವೀಣಾ ಉಪಸ್ಥಿತರಿದ್ದರು. ಕುಮಾರಿ ವಿಧ್ರಾತ್ರಿ ಪ್ರಾರ್ಥನೆ ಮಾಡಿದರು. ಶಿಬಿರಾರ್ಥೀಗಳಾದ ಬಸವರಾಜ್, ಶೃಜನ್ಯ, ದಿವ್ಯಾ, ವಿಧಾತ್ರಿ ತಮ್ಮ ತರಬೇತಿಯ ಅನುಭವ ಹಂಚಿಕೊಂಡರು.

Related posts

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya
error: Content is protected !!