25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

ಮಡಂತ್ಯಾರು : ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಶಿಶು ವಿಹಾರ ಮಹಿಳಾ ಮಂಡಲದಲ್ಲಿ ಜೆಸಿ ಸಮ್ಮಿಲನ ಇತ್ತೀಚೆಗೆ ನಡೆಯಿತು.

ಜೆಸಿ ಭಾರತಿ ಸುರೇಶ್ ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಜೆಸಿ ಸದಸ್ಯರೆಲ್ಲರೂ ಜೆಸಿವಾಣಿ ವಾಚಿಸಿದರು. ಕಾರ್ಯಕ್ರಮವನ್ನು ಘಟಕದ ಪೂರ್ವಧ್ಯಕ್ಷರು ಜೆಸಿ ಬಿ. ಜಯಂತ ಶೆಟ್ಟಿ ಬಂಡಾರಿಗುಡ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಶುಭವನ್ನ ಹಾರೈಸುವುದರೊಂದಿಗೆ ಹಿಂದಿನ ಘಟಕದ ಕಾರ್ಯಕ್ರಮಕ್ಕೂ ಈಗಿರುವ ಸಂಸ್ಥೆಯ ಕಾರ್ಯಕ್ರಮಕ್ಕೂ ಹೊಂದಾಣಿಕೆಯ ವಿಚಾರಗಳ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜೆಸಿಐ ವಲಯ 15 ರ ಉಪಾಧ್ಯಕ್ಷ ರಂಜಿತ್ ಎಚ್ ಡಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಯನ್ನು 10 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಅಧ್ಯಕ್ಷ ಸಚಿನ್ ಸುವರ್ಣ ಇವರಿಗೆ ನೀಡಿ ಗೌರವಿಸಲಾಯಿತು.

ಅಧ್ಯಕ್ಷೆ ಜೆಸಿ ಅಮಿತಾ ಅಶೋಕ್ ಸ್ವಾಗತಿಸಿದರು. ಜೆಸಿ ಮನೋಜ್ ಮಾಯಿಲೋಡಿ ಸನ್ಮಾನಿತರ ಪರಿಚಯ ವಾಚಿಸಿದರು. ಜೆಸಿಐ ಕುಟುಂಬಕ್ಕೆ ಹೊಸದಾಗಿ ಸೇರ್ಪಡೆ ಗೊಂಡ ಶ್ರೀಮತಿ ಅಶ್ವಿನಿ ಯವರಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಬೋದಿಸಿದರು, ವಲಯ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯದರ್ಶಿ ಜೇಸಿ ಆದರ್ಶ ಹಟ್ಟತ್ತೊಡಿ ಧನ್ಯವಾದವಿತ್ತರು.


ಜೆಸಿ ತುಳಸಿ ದಾಸ್ ಪೈ ಮನೋರಂಜನೇಯ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ವಿತ್ತರು. ಜೇಸಿ ವಿಕೇಶ್ ಮಾನ್ಯ ಹಾಗೂ ಜೇಸಿ ಅಜಯ್ ಜೆ. ಶೆಟ್ಟಿ ಇವರ ಆತಿಥ್ಯದಲ್ಲಿ ಕಾರ್ಯಕ್ರಮ ನಡೆಯಿತು

Related posts

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!