22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಪತ್ರ ವೈರಲ್ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು ವಿಚಾರಣೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ವಕೀಲರು ಹೊರಡಿಸಿರುವ ಪತ್ರದಲ್ಲಿ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಹಲವಾರು ಕೊಲೆ, ಅತ್ಯಾಚಾರ ಮಾಡಿದ ಮೃತದೇಹಗಳನ್ನು ಹೂತು ಹಾಕಿದ್ದು ಅದನ್ನು ಪೊಲೀಸರು ಪ್ರಕರಣ ದಾಖಲಿಸಿ ಆತನಿಗೆ ಭದ್ರತೆ ನೀಡಿಬೇಕು ಬಳಿಕ ಎಲ್ಲಾ ಹೂತು ಹಾಕಿದ ಮೃತದೇಹ ಪೊಲೀಸರಿಗೆ ಗೌಪ್ಯವಾಗಿ ತೊರಿಸಿಕೊಡುತ್ತೇನೆ.ಅದಲ್ಲದೆ ಇತ್ತಿಚೆಗೆ ಗೌಪ್ಯವಾಗಿ ಬಂದು ಹೂತು ಹಾಕಿದ ಮೃತದೇಹದ ಕಳೇಬರ ಹೊರತೆಗೆದಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ.

ದೂರಿನ ಜೊತೆ ಕೆಲಸ ಮಾಡಿದ ಸಂಸ್ಥೆಯ ಐಡಿ ಕಾರ್ಡ್ ,ಆಧಾರ್ ಕಾರ್ಡ್ , ಹೊರತೆಗೆದ ಕಳೇಬರದ ಫೋಟೋ ಜೊತೆಯಲ್ಲಿ ಲಗತ್ತು ಮಾಡಿರುವುದಾಗಿ 6 ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!