September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!