25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!