25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತೀ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ನೂತನ ಸಿರಿ ಮಿಲ್ಲೆಟ್ ಕೆಫೆ’ಯು ಜು. 4 ರಂದು ಶುಭಾರಂಭಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಸಿರಿ ಸಂಸ್ಥೆಯ ಅಧ್ಯಕ್ಷರು ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಿನೂತನವಾದ ಸಿರಿ ಮಿಲ್ಲೆಟ್ ಕೆಫೆಯ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀಮತಿ ಪದ್ಮಲತಾ ನಿರಂಜನ್ ದಂಪತಿಗಳು ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧಾರವಾಡ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಜೀವಂಧರ್ ಕುಮಾರ್, ಹಣಕಾಸು ನಿರ್ದೇಶಕರಾದ ವಿ.ಜಿ.ಪ್ರಭು, ಧಾರವಾಡ ಎಸ್.ಡಿ.ಎಂ ಡೆಂಟಲ್ ಹಾಸ್ಪಿಟಲ್ ಪಿ.ಆರ್.ಒ ನಾಗ್ ಕುಮಾರ್, ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿ.ಸಿ.ಒ ಗಣೇಶ್ ಪ್ರಸಾದ್ ಎಸ್ ಕಾಮತ್, ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!