22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

ಮಡಂತ್ಯಾರು : ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಶಿಶು ವಿಹಾರ ಮಹಿಳಾ ಮಂಡಲದಲ್ಲಿ ಜೆಸಿ ಸಮ್ಮಿಲನ ಇತ್ತೀಚೆಗೆ ನಡೆಯಿತು.

ಜೆಸಿ ಭಾರತಿ ಸುರೇಶ್ ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಜೆಸಿ ಸದಸ್ಯರೆಲ್ಲರೂ ಜೆಸಿವಾಣಿ ವಾಚಿಸಿದರು. ಕಾರ್ಯಕ್ರಮವನ್ನು ಘಟಕದ ಪೂರ್ವಧ್ಯಕ್ಷರು ಜೆಸಿ ಬಿ. ಜಯಂತ ಶೆಟ್ಟಿ ಬಂಡಾರಿಗುಡ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಶುಭವನ್ನ ಹಾರೈಸುವುದರೊಂದಿಗೆ ಹಿಂದಿನ ಘಟಕದ ಕಾರ್ಯಕ್ರಮಕ್ಕೂ ಈಗಿರುವ ಸಂಸ್ಥೆಯ ಕಾರ್ಯಕ್ರಮಕ್ಕೂ ಹೊಂದಾಣಿಕೆಯ ವಿಚಾರಗಳ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜೆಸಿಐ ವಲಯ 15 ರ ಉಪಾಧ್ಯಕ್ಷ ರಂಜಿತ್ ಎಚ್ ಡಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿ ಯನ್ನು 10 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಅಧ್ಯಕ್ಷ ಸಚಿನ್ ಸುವರ್ಣ ಇವರಿಗೆ ನೀಡಿ ಗೌರವಿಸಲಾಯಿತು.

ಅಧ್ಯಕ್ಷೆ ಜೆಸಿ ಅಮಿತಾ ಅಶೋಕ್ ಸ್ವಾಗತಿಸಿದರು. ಜೆಸಿ ಮನೋಜ್ ಮಾಯಿಲೋಡಿ ಸನ್ಮಾನಿತರ ಪರಿಚಯ ವಾಚಿಸಿದರು. ಜೆಸಿಐ ಕುಟುಂಬಕ್ಕೆ ಹೊಸದಾಗಿ ಸೇರ್ಪಡೆ ಗೊಂಡ ಶ್ರೀಮತಿ ಅಶ್ವಿನಿ ಯವರಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಬೋದಿಸಿದರು, ವಲಯ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯದರ್ಶಿ ಜೇಸಿ ಆದರ್ಶ ಹಟ್ಟತ್ತೊಡಿ ಧನ್ಯವಾದವಿತ್ತರು.


ಜೆಸಿ ತುಳಸಿ ದಾಸ್ ಪೈ ಮನೋರಂಜನೇಯ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ವಿತ್ತರು. ಜೇಸಿ ವಿಕೇಶ್ ಮಾನ್ಯ ಹಾಗೂ ಜೇಸಿ ಅಜಯ್ ಜೆ. ಶೆಟ್ಟಿ ಇವರ ಆತಿಥ್ಯದಲ್ಲಿ ಕಾರ್ಯಕ್ರಮ ನಡೆಯಿತು

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya
error: Content is protected !!