September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಪತ್ರ ವೈರಲ್ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು ವಿಚಾರಣೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ವಕೀಲರು ಹೊರಡಿಸಿರುವ ಪತ್ರದಲ್ಲಿ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಹಲವಾರು ಕೊಲೆ, ಅತ್ಯಾಚಾರ ಮಾಡಿದ ಮೃತದೇಹಗಳನ್ನು ಹೂತು ಹಾಕಿದ್ದು ಅದನ್ನು ಪೊಲೀಸರು ಪ್ರಕರಣ ದಾಖಲಿಸಿ ಆತನಿಗೆ ಭದ್ರತೆ ನೀಡಿಬೇಕು ಬಳಿಕ ಎಲ್ಲಾ ಹೂತು ಹಾಕಿದ ಮೃತದೇಹ ಪೊಲೀಸರಿಗೆ ಗೌಪ್ಯವಾಗಿ ತೊರಿಸಿಕೊಡುತ್ತೇನೆ.ಅದಲ್ಲದೆ ಇತ್ತಿಚೆಗೆ ಗೌಪ್ಯವಾಗಿ ಬಂದು ಹೂತು ಹಾಕಿದ ಮೃತದೇಹದ ಕಳೇಬರ ಹೊರತೆಗೆದಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ.

ದೂರಿನ ಜೊತೆ ಕೆಲಸ ಮಾಡಿದ ಸಂಸ್ಥೆಯ ಐಡಿ ಕಾರ್ಡ್ ,ಆಧಾರ್ ಕಾರ್ಡ್ , ಹೊರತೆಗೆದ ಕಳೇಬರದ ಫೋಟೋ ಜೊತೆಯಲ್ಲಿ ಲಗತ್ತು ಮಾಡಿರುವುದಾಗಿ 6 ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

Related posts

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya
error: Content is protected !!