22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಪತ್ರ ವೈರಲ್ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು ವಿಚಾರಣೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ವಕೀಲರು ಹೊರಡಿಸಿರುವ ಪತ್ರದಲ್ಲಿ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಹಲವಾರು ಕೊಲೆ, ಅತ್ಯಾಚಾರ ಮಾಡಿದ ಮೃತದೇಹಗಳನ್ನು ಹೂತು ಹಾಕಿದ್ದು ಅದನ್ನು ಪೊಲೀಸರು ಪ್ರಕರಣ ದಾಖಲಿಸಿ ಆತನಿಗೆ ಭದ್ರತೆ ನೀಡಿಬೇಕು ಬಳಿಕ ಎಲ್ಲಾ ಹೂತು ಹಾಕಿದ ಮೃತದೇಹ ಪೊಲೀಸರಿಗೆ ಗೌಪ್ಯವಾಗಿ ತೊರಿಸಿಕೊಡುತ್ತೇನೆ.ಅದಲ್ಲದೆ ಇತ್ತಿಚೆಗೆ ಗೌಪ್ಯವಾಗಿ ಬಂದು ಹೂತು ಹಾಕಿದ ಮೃತದೇಹದ ಕಳೇಬರ ಹೊರತೆಗೆದಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ.

ದೂರಿನ ಜೊತೆ ಕೆಲಸ ಮಾಡಿದ ಸಂಸ್ಥೆಯ ಐಡಿ ಕಾರ್ಡ್ ,ಆಧಾರ್ ಕಾರ್ಡ್ , ಹೊರತೆಗೆದ ಕಳೇಬರದ ಫೋಟೋ ಜೊತೆಯಲ್ಲಿ ಲಗತ್ತು ಮಾಡಿರುವುದಾಗಿ 6 ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

Related posts

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!