25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!