23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

ಮೊಗ್ರು : ಸರಕಾರಿ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಮುಗೇರಡ್ಕ ಇದರಿಂದ ದತ್ತು ಸ್ವೀಕರಿಸಲ್ಪಟ್ಟ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು, ಬೆಳ್ತಂಗಡಿ ಇಲ್ಲಿ ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಅನುಮೋದನೆಯೊಂದಿಗೆ 2024-25 ರ ಶೈಕ್ಷಣಿಕ ಅವಧಿಯ 1ನೇ ತರಗತಿಯ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ದ್ವಿ ಭಾಷಾ ಶಿಕ್ಷಣ ನೀತಿಯಲ್ಲಿ ಶಿಕ್ಷಣ ನೀಡಲು ಅನುಮತಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದೆ.

ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇದನ್ನು ದತ್ತು ಸ್ವೀಕಾರ ಮಾಡಿದ ಮುಗೇರಡ್ಕ ಸರಕಾರಿ ಶಾಲಾ ಟ್ರಸ್ಟ್ ಈಗಾಗಲೇ ಶಾಲೆಗೆ ಬೇಕಾದ ಇಬ್ಬರು ಆಂಗ್ಲ ಭಾಷಾ ಶಿಕ್ಷಣ ನೀಡುವ ಅನುಭವಿ ಶಿಕ್ಷಕಿಯರನ್ನು ನೇಮಕ ಮಾಡಿದ್ದು, ಶಾಲೆಗೆ ಬೇಕಾದ ಪೀಠೋಪಕರಣ ಹಾಗೂ ಇನ್ನಿತರ ಮೂಲಭೂತ ಸೌಲಭ್ಯ ಒದಗಿಸುತ್ತಿದೆ. ಟ್ರಸ್ಟ್ನ ನೇತೃತ್ವದಲ್ಲಿ ಶಾಲಾ ವಾಹನ ಸೌಲಭ್ಯವನ್ನು ಒದಗಿಸಿದೆ.


ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಣ ಅನುಮತಿ ಪಡೆಯುವ ಪ್ರಯತ್ನವನ್ನು ಟ್ರಸ್ಟ್ನ ಅಧ್ಯಕ್ಷ ಕುಶಾಲಪ್ಪ ಗೌಡ ನೆಕ್ಕರಾಜೆ ವಹಿಸಿದ್ದು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಸಾಥ್ ನೀಡಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಸಹಕರಿಸಿದರು.

ಟ್ರಸ್ಟ್ನ ಕಾರ್ಯದರ್ಶಿ ಮನೋಹರ ಅಂತರ, ಕೋಶಾಧಿಕಾರಿ ಪುರಂದರ , ಪಂಚಾಯತ್ ಸದಸ್ಯ ಟ್ರಸ್ಟಿ ಬಾಲಕೃಷ್ಣ ಮುಗೇರಡ್ಕ, ಟ್ರಸ್ಟಿ ಚಂದಪ್ಪ ಡಿ. ಎಸ್, ಟ್ರಸ್ಟಿ ಪ್ರದೀಪ್, ಶಾಲಾ ಪ್ರಬಾರ ಮುಖೋಪಾಧ್ಯಾಯ ಮಾಧವ ಗೌಡ, ನಿಕಟಪೂರ್ವ ಎಸ್.ಡಿ.ಎಂ,ಸಿ ಅಧ್ಯಕ್ಷ ಶೀನಪ್ಪ ಗೌಡ ನೆಕ್ಕರಜೆ ಸಹಕರಿಸಿದರು.


ಈ ವರ್ಷ ಆಂಗ್ಲ ಭಾಷಾ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಮಕ್ಕಳಿಗೆ ಅವಕಾಶವಿದ್ದು ಶಾಲೆಗೆ ಪ್ರವೇಶ ಪಡೆಯಬಹುದು.
ಸಂಪರ್ಕಿಸಿ : 9480004379 /   9845588740

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya
error: Content is protected !!