September 6, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya
error: Content is protected !!