25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya
error: Content is protected !!