25.5 C
ಪುತ್ತೂರು, ಬೆಳ್ತಂಗಡಿ
July 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!