23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya
error: Content is protected !!