September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!