23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!