23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!