23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಗಾರೆ 38, ಬಡಗಿ 32, ಹೊಲಿಗೆ ಯಂತ್ರ 66, ಎಲೆಕ್ಟ್ರಿಕಲ್ 8, ಕಮ್ಮಾರಿಕೆ 5, ಅಟೊ ಮೊಬೈಲ್ 7 ಒಟ್ಟು 156 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣ ಗಳನ್ನು ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.

Related posts

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya
error: Content is protected !!