September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

ವೇಣೂರು: ನಮ್ಮ ಹಿರಿಯರ ಪರಿಸರ ಕಾಳಜಿ ನಮಗಿಂದು ಉಸಿರಾಗಿ ದಕ್ಕಿದೆ. ಇದನ್ನು ವರ್ಧಿಸುವುದಕ್ಕಾಗಿ ಯುವ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಸರ ಕಾಳಜಿಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಎಕ್ಸೆಲ್ ಕ್ಯಾಂಪಸ್ ವ್ಯವಸ್ಥಾಪಕ ಶಾಂತಿ ರಾಜ್ ಜೈನ್ ಹೇಳಿದರು.

ಅವರು, ಜು. 5ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಬಿ, ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದ ಸಮಯದಲ್ಲಿ ಒಂದು ಗಿಡ ನೆಟ್ಟು ಪರಿಸರ ಕಾಳಜಿಯನ್ನು ಅರ್ಥ ಪೂರ್ಣವಾಗಿಸಬೇಕೆಂದರು. ಪ್ರಾಸ್ತಾವಿಕ ನುಡಿದ
ಶಿಕ್ಷಕಿ ಕಾವ್ಯಶ್ರೀ 1950ರಲ್ಲಿ ಆಚರಣೆಗೆ ಬಂದ ವನಮಹೋತ್ಸವ, ಜಾಗೃತಿ ಅಭಿಯಾನವಾಗಿ ರೂಪುಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಎಕ್ಸೆಲ್ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕಿ ಶ್ರೀಮತಿ ಸಹನಾ ಜೈನ್, ಸದಸ್ಯರಾದ ಶ್ರೀಮತಿ ಶ್ರುತಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಾದ ಪ್ರಣಮ್ಯಾ, ಸಾನ್ವಿ, ಅನ್ವಿತಾ, ಹರ್ಷಿಕಾ ಪ್ರಾರ್ಥಿಸಿದ ಸಭೆಗೆ ಶಿಕ್ಷಕರಾದ ಅರುಣ್ ಕುಮಾರ್ ನಿರೂಪಿಸಿ , ದಾಮೋದರ್ ಸ್ವಾಗತಿಸಿ, ಶ್ರೀಮತಿ ಅಪರ್ಣಾ ಧನ್ಯವಾದವಿತ್ತರು.

ಶ್ವೇತಾ ಜೈನ್, ಶಾಲಿನಿ, ವಿಂದ್ಯಾ, ಅಕ್ಷತಾ , ಪ್ರಸಾದ್, ಮಮತಾ ಸಹಕರಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya
error: Content is protected !!