July 23, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya
error: Content is protected !!