24.8 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ” ವಿಜ್ ವರ್ಲ್ಡ್- 2024″ ಸ್ಪರ್ಧೆ

Suddi Udaya

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya
error: Content is protected !!