30.8 C
ಪುತ್ತೂರು, ಬೆಳ್ತಂಗಡಿ
September 12, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!