ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಲು ಸಿದ್ದವಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವ್ಯಕ್ತಿಯ ಪರವಾಗಿ ವಕೀಲರ ತಂಡ ಜಿಲ್ಲಾ ಪೊಲೀಸರ ಕಛೇರಿಗೆ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ಬಗ್ಗೆ, ವೆಬ್ ನ್ಯೂಸ್ ವೊಂದರಲ್ಲಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತೆ, ಸುಳ್ಳು ಮಾಹಿತಿಯನ್ನು ವರದಿ ಮಾಡಿದ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿ, ವಕೀಲರ ತಂಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಲು ಪೂರ್ವಾನುಮತಿ ಪಡೆದಿದ್ದಾರೆಯೇ ಎಂಬ ಬಗ್ಗೆ ಹಾಗೂ ವಕೀಲರ ತಂಡ ಬಂದಾಗ ಪೊಲೀಸ್ ವರಿಷ್ಠಾಧಿಕಾರಿಗಳು ಲಭ್ಯರಿಲ್ಲದಿರಲು ಕಾರಣವೇನು ಎಂಬ ಯಾವುದೇ ಮಾಹಿತಿಗಳನ್ನು ಪರಿಶೀಲಿಸದೇ, ಯಾವುದೇ ಸೂಕ್ತ ಸಾಕ್ಷಿ/ಪುರಾವೆಗಳು ಇಲ್ಲದೇ ಸುಳ್ಳು ಮಾಹಿತಿಯನ್ನು ವರದಿ ಮಾಡಿರುವುದು ದೃಢಪಟ್ಟಿರುತ್ತದೆ. ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2025 ಕಲಂ :352, 353(1)b BNS ರಂತೆ ಪ್ರಕರಣ ದಾಖಲಿಸಲಾಗಿದೆ.











