23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!