23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಪಡಂಗಡಿ ಪುತ್ಯೆಯಲ್ಲಿವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ,ಕಾಲುಗ ಳನ್ನು ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ ವಂಚನೆ

Suddi Udaya

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya
error: Content is protected !!