23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!