July 23, 2026
ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28ವ), ಎಂಬಾತನು ತನ್ನ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಯಲ್ಲಪ್ಪ ಹೆಚ್ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿದೆ.

ಸೊತ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್ ರವೂಪ್ (20ವ) ಎಂಬವರನ್ನು ಬಂಧಿಸಿ ಅವರ ವಿರುದ್ಧ ಜು.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಕೇಸು ದಾಖಲಿಸಲಾಗಿದೆ.

Related posts

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
error: Content is protected !!