25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ, ಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್‌ ರಜಾಕ್‌ (28), ಎಂಬಾತನು ಬೆಳ್ತಂಗಡಿ ಎಂಬವರಿಗೆ ಸಂಬಂಧಪಟ್ಟ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಯಲ್ಲಪ್ಪ ಹೆಚ್‌ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್‌ ನೊಳಗೆ ಇರಿಸಿರುವುದು ಕಂಡುಬಂದಿರುತ್ತದೆ. ಸದ್ರಿ ಸೊತ್ತುಗಳನ್ನು ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್‌ ರಜಾಕ್‌ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿತ ಅಬ್ದುಲ್‌ ರವೂಪ್‌ (20) ಎಂಬವರ ವಿರುದ್ಧ ಜು.02 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಿಸಲಾಗಿ, ಸಹೋದರರಾದ ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!