22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ ಘಟನೆ ಜು. 2ರಂದು ನಡೆದಿದೆ.

ಘಟನೆ ವಿವರ: ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ, ಆರೋಪಿತನಾದ ಮಲವಂತಿಗೆ ನಿವಾಸಿ ಅಬ್ದುಲ್‌ ರಜಾಕ್‌ (28), ಎಂಬಾತನು ಬೆಳ್ತಂಗಡಿ ಎಂಬವರಿಗೆ ಸಂಬಂಧಪಟ್ಟ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಯಲ್ಲಪ್ಪ ಹೆಚ್‌ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್‌ ನೊಳಗೆ ಇರಿಸಿರುವುದು ಕಂಡುಬಂದಿರುತ್ತದೆ. ಸದ್ರಿ ಸೊತ್ತುಗಳನ್ನು ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್‌ ರಜಾಕ್‌ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿತ ಅಬ್ದುಲ್‌ ರವೂಪ್‌ (20) ಎಂಬವರ ವಿರುದ್ಧ ಜು.02 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಿಸಲಾಗಿ, ಸಹೋದರರಾದ ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.

Related posts

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!