25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!