25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!