23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ರವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು.

ಪರಿಸರ ಪ್ರೇಮಿಯಾದ ಶ್ರೀಮತಿ ಪ್ರಸನ್ನ ರವರು ಮಾತನಾಡಿ ‘ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸನ್ನ ರವರ ಪುತ್ರಿಯಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು . ಶಿಕ್ಷಕಿಯಾದ ಕುಮಾರಿ ಪ್ರಜ್ಞಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!