25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!