25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಲು ಸಿದ್ದವಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವ್ಯಕ್ತಿಯ ಪರವಾಗಿ ವಕೀಲರ ತಂಡ ಜಿಲ್ಲಾ ಪೊಲೀಸರ ಕಛೇರಿಗೆ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ಬಗ್ಗೆ, ವೆಬ್ ನ್ಯೂಸ್ ವೊಂದರಲ್ಲಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತೆ, ಸುಳ್ಳು ಮಾಹಿತಿಯನ್ನು ವರದಿ ಮಾಡಿದ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿ, ವಕೀಲರ ತಂಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಲು ಪೂರ್ವಾನುಮತಿ ಪಡೆದಿದ್ದಾರೆಯೇ ಎಂಬ ಬಗ್ಗೆ ಹಾಗೂ ವಕೀಲರ ತಂಡ ಬಂದಾಗ ಪೊಲೀಸ್ ವರಿಷ್ಠಾಧಿಕಾರಿಗಳು ಲಭ್ಯರಿಲ್ಲದಿರಲು ಕಾರಣವೇನು ಎಂಬ ಯಾವುದೇ ಮಾಹಿತಿಗಳನ್ನು ಪರಿಶೀಲಿಸದೇ, ಯಾವುದೇ ಸೂಕ್ತ ಸಾಕ್ಷಿ/ಪುರಾವೆಗಳು ಇಲ್ಲದೇ ಸುಳ್ಳು ಮಾಹಿತಿಯನ್ನು ವರದಿ ಮಾಡಿರುವುದು ದೃಢಪಟ್ಟಿರುತ್ತದೆ. ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2025 ಕಲಂ :352, 353(1)b BNS ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!