July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು. 4 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮ ಗುರುಗಳು , ಮುಖ್ಯ ಅತಿಥಿಗಳು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿದ್ಯಾರ್ಥಿನಿಯಾದ ಕು. ಸಾನ್ವಿ ಶೆಣೈ ರವರು ವನಮಹೋತ್ಸವದ ಮಹತ್ವದ ಬಗ್ಗೆ ವಿವರಣೆ ನೀಡಿದರು. ವಿದ್ಯಾರ್ಥಿಗಳು ಹಾಡು, ನೃತ್ಯ, ನಾಟಕದ ಮೂಲಕ ವನಮಹೋತ್ಸವದ ಮಹತ್ವವನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಗಳಾಗಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ದೇವಾಡಿಗರವರು ಆಗಮಿಸಿ, ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವನಮಹೋತ್ಸವ ಎಂದರೆ ಗಿಡ ನೆಡುವುದು ಮಾತ್ರವಲ್ಲ ನಾವು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಬೇಕೆಂದು ಹೇಳಿ, ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ಆಗಮಿಸಿ, ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಪ್ರಕೃತಿಯನ್ನು ಪ್ರೀತಿಸಿ, ಗಿಡ-ಮರಗಳನ್ನು ಬೆಳೆಸಿ, ಪ್ರಕೃತಿಯನ್ನು ಉಳಿಸಿ, ಎಂದು ಹೇಳಿ ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಗಳಿಗೆ, ಎಲ್ಲಾ ಗಣ್ಯರಿಗೆ, ಶಿಕ್ಷಕ ವೃಂದದವರಿಗೆ, ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ ರವರು, ಅರಣ್ಯ ಆಯುಕ್ತರಾದ ರವಿ ಕುಮಾರ್ ರವರು, ಶಿಕ್ಷಕ- ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಫ್ಲಾಯಿಡ್ ಮಿಸ್ಕಿತ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಯಶ್ವಿನ್ ಕುಮಾರ್ ಸ್ವಾಗತಿಸಿ, ಅಮೃತ್ ಧನ್ಯವಾದವನ್ನು ಸಮರ್ಪಿಸಿದರು. ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!