September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

ವೇಣೂರು: ನಮ್ಮ ಹಿರಿಯರ ಪರಿಸರ ಕಾಳಜಿ ನಮಗಿಂದು ಉಸಿರಾಗಿ ದಕ್ಕಿದೆ. ಇದನ್ನು ವರ್ಧಿಸುವುದಕ್ಕಾಗಿ ಯುವ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಸರ ಕಾಳಜಿಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಎಕ್ಸೆಲ್ ಕ್ಯಾಂಪಸ್ ವ್ಯವಸ್ಥಾಪಕ ಶಾಂತಿ ರಾಜ್ ಜೈನ್ ಹೇಳಿದರು.

ಅವರು, ಜು. 5ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಬಿ, ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದ ಸಮಯದಲ್ಲಿ ಒಂದು ಗಿಡ ನೆಟ್ಟು ಪರಿಸರ ಕಾಳಜಿಯನ್ನು ಅರ್ಥ ಪೂರ್ಣವಾಗಿಸಬೇಕೆಂದರು. ಪ್ರಾಸ್ತಾವಿಕ ನುಡಿದ
ಶಿಕ್ಷಕಿ ಕಾವ್ಯಶ್ರೀ 1950ರಲ್ಲಿ ಆಚರಣೆಗೆ ಬಂದ ವನಮಹೋತ್ಸವ, ಜಾಗೃತಿ ಅಭಿಯಾನವಾಗಿ ರೂಪುಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಎಕ್ಸೆಲ್ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕಿ ಶ್ರೀಮತಿ ಸಹನಾ ಜೈನ್, ಸದಸ್ಯರಾದ ಶ್ರೀಮತಿ ಶ್ರುತಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಾದ ಪ್ರಣಮ್ಯಾ, ಸಾನ್ವಿ, ಅನ್ವಿತಾ, ಹರ್ಷಿಕಾ ಪ್ರಾರ್ಥಿಸಿದ ಸಭೆಗೆ ಶಿಕ್ಷಕರಾದ ಅರುಣ್ ಕುಮಾರ್ ನಿರೂಪಿಸಿ , ದಾಮೋದರ್ ಸ್ವಾಗತಿಸಿ, ಶ್ರೀಮತಿ ಅಪರ್ಣಾ ಧನ್ಯವಾದವಿತ್ತರು.

ಶ್ವೇತಾ ಜೈನ್, ಶಾಲಿನಿ, ವಿಂದ್ಯಾ, ಅಕ್ಷತಾ , ಪ್ರಸಾದ್, ಮಮತಾ ಸಹಕರಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!